ADVERTISEMENT

‘ಗಡಿನಾಡಿನ ಪ್ರತಿಭೆಗೆ ಅವಕಾಶ ನೀಡಿ’

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2013, 7:18 IST
Last Updated 7 ಡಿಸೆಂಬರ್ 2013, 7:18 IST

ಚಿಕ್ಕಬಳ್ಳಾಪುರ: ಗಾಯನ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿ­ರುವ ಗ.ನ.ಅಶ್ವತ್ಥ್‌ರಂಥ ಪ್ರತಿಭೆಗಳು ಬೆಳಕಿಗೆ ಬರಬೇಕು ಎಂದು ಸಾಹಿತಿ ಡಾ.ಆರ್‌.ಕೆ.ನಲ್ಲೂರು ಪ್ರಸಾದ್‌ ತಿಳಿಸಿದರು.

ಅನನ್ಯ ಕಲಾರಂಗ ವೇದಿಕೆಯ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ‘ಜಾಗೃತಿ ಗೀತೆಗಳ ಗಾಯನ’ ಸಿ.ಡಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸಂಗಮೇಶ್‌ ಬಾದವಾಡಗಿ, ಸಮತಾ ಸೈನಿಕ ದಳದ ರಾಜ್ಯ ಘಟಕದ ಅಧ್ಯಕ್ಷ ಎಂ.ವೆಂಕಟ­ಸ್ವಾಮಿ, ಶಿಕ್ಷಣ ತಜ್ಞ ಪ್ರೊ.ಕೋಡಿ­ರಂಗಪ್ಪ, ಕವಿ ಡಾ.ಕಾ.ವೆಂ.­ಶ್ರೀನಿವಾಸಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಕಾರ್ಯದರ್ಶಿ ಕೋ.ವೆಂ.ರಾಮಕೃಷ್ಣೇಗೌಡ, ಅನನ್ಯ ಕಲಾರಂಗ ವೇದಿಕೆಯ ಅಧ್ಯಕ್ಷ ಗ.ನ.ಅಶ್ವತ್ಥ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.