ADVERTISEMENT

‘ಬಿಜೆಪಿ ಪಕ್ಷ ಮುಸ್ಲಿಮರ ವಿರೋಧಿಯಲ್ಲ’

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2014, 9:49 IST
Last Updated 17 ಮಾರ್ಚ್ 2014, 9:49 IST

ಗೌರಿಬಿದನೂರು: ಗುಜರಾತ್‌ನಲ್ಲಿ ನರೇಂದ್ರ ಮೋದಿ ಮಾಡಿದ ಅಭಿವೃದ್ಧಿ ಕೆಲಸ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಭ್ರಷ್ಟಾ­ಚಾರ­ಗಳನ್ನು ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಮನವರಿಕೆ ಮಾಡಿಕೊಡ­ಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಂ.ರವಿನಾರಾಯಣರೆಡ್ಡಿ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಯುವ ಬಿಜೆಪಿ ಘಟಕ ಭಾನುವಾರ ಏರ್ಪಡಿಸಿದ್ದ ಮತಗಟ್ಟೆ ಸಮಿತಿ ಕಾರ್ಯ­ಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ ಮುಸ್ಲಿಂ ವಿರೋಧಿ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಕೆಳ ಹಂತದ ಚುನಾವಣೆಗಳಿಗೆ ಶ್ರಮಿಸುವಂತೆಯೇ ಲೋಕಸಭೆ ಚುನಾವಣೆಗೂ ಕಾರ್ಯ­ಕರ್ತರು ನಿಷ್ಠೆಯಿಂದ ದುಡಿಯಬೇಕು ಎಂದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗೋಪಿನಾಥ್ ಮಾತನಾಡಿದರು. ಪುರ­ಸಭೆ ಸದಸ್ಯರಾದ ಮಾರುಕಟ್ಟೆ ಮೋಹನ್, ಗೋವಿಂದರಾಜು, ಪಕ್ಷದ ಮುಖಂಡರಾದ ಕೋಚಿಮುಲ್ ನಿರ್ದೇ­ಶಕ ರಮೇಶ್, ವೆಂಕಟರಾಮರೆಡ್ಡಿ, ನಾಗ­ರಾಜರೆಡ್ಡಿ, ಮುರಳೀಧರ್, ಉಸ್ಮಾನ್, ಕೃಷ್ಣಮೂರ್ತಿ, ಕೃಷ್ಣಪ್ಪ, ರಮೇಶ್ ರಾವ್, ಜಯಣ್ಣ, ಕೋಟೆ ವೇಣು, ಶಶಿಧರ್, ಶೋಭಾ, ಜಯ­ಲಕ್ಷ್ಮಮ್ಮ, ಮುನಿಲಕ್ಷ್ಮಮ್ಮ ಇತರ­ರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.