ADVERTISEMENT

‘ಶಿಕ್ಷಣಕ್ಕೆ ರೂ 18 ಸಾವಿರ ಕೋಟಿ ವಿನಿಯೋಗ’

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2013, 9:38 IST
Last Updated 10 ಡಿಸೆಂಬರ್ 2013, 9:38 IST

ಚಿಕ್ಕಬಳ್ಳಾಪುರ: ಮಕ್ಕಳು ಶೈಕ್ಷಣಿಕ ಪರೀಕ್ಷೆಗಳಲ್ಲಿ ಅಷ್ಟೇ ಅಲ್ಲ, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹ ಶಿಕ್ಷಕರು ಪ್ರಮುಖ ಪಾತ್ರವಹಿಸುತ್ತಾರೆ. ವಿದ್ಯಾ­ರ್ಥಿಯ ಜೀವನ ಯಶಸ್ವಿಯಾಗುವಲ್ಲಿ ಶಿಕ್ಷಕರ ಕೊಡುಗೆ ಮಹತ್ತರವಾಗಿದ್ದು, ಅವರನ್ನು ಸದಾ ಕಾಲ ಸ್ಮರಿಸಬೇಕು ಎಂದು ಶಾಸಕ ಡಾ. ಕೆ.ಸುಧಾಕರ್‌ ತಿಳಿಸಿದರು.

ತಾಲ್ಲೂಕಿನ ಮುದ್ದೇನಹಳ್ಳಿ ಸತ್ಯಸಾಯಿ ಲೋಕಸೇವಾ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಸೋಮ­ವಾರ ನಡೆದ ಕಾರ್ಯಕ್ರಮ­ದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಗಳಿಸಿದ ಪ್ರೌಢಶಾಲೆಗಳಿಗೆ ಪ್ರಶಸ್ತಿ ಮತ್ತು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು.

ಶಿಕ್ಷಣ ಕ್ಷೇತ್ರಕ್ಕೆಂದೇ ರಾಜ್ಯ ಸರ್ಕಾ­ರವು ಸುಮಾರು ₨ 18 ಸಾವಿರ ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದು, ಅದರಲ್ಲಿ 14 ಸಾವಿರ ಕೋಟಿ ರೂಪಾಯಿ ಶಿಕ್ಷಕರ ವೇತನಕ್ಕೆ ವಿನಿಯೋಗವಾಗುತ್ತಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್‌.ಎನ್‌.ಚಿನ್ನಪ್ಪ, ಮುಖ್ಯಕಾರ್ಯ­ನಿರ್ವಹಣಾಧಿಕಾರಿ ನೀಲಾ ಮಂಜು­ನಾಥ್‌, ಸಾರ್ವಜನಿಕ ಶಿಕ್ಷಣ ಇಲಾ­ಖೆಯ ಉಪನಿರ್ದೇಶಕ ಅಜಿತ್‌­ಪ್ರಸಾದ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.