ADVERTISEMENT

ಚಿಂತಾಮಣಿ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು- ಆಟವಾಡಲು ತೆರಳಿದ್ದರು

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 16:27 IST
Last Updated 2 ಆಗಸ್ಟ್ 2022, 16:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಂತಾಮಣಿ: ತಾಲ್ಲೂಕಿನ ಕೊಡಗೊಂಡ್ಲು ಗ್ರಾಮದ ಕೆರೆಯಲ್ಲಿ ಮುಳುಗಿ ಮಂಗಳವಾರ ಸಂಜೆ ಮೂವರು ಮಕ್ಕಳು ಮೃತಪಟ್ಟಿದ್ದಾರೆ.

ವೆಂಕಟೇಶ್ ಅವರ ಪುತ್ರ ರಾಮ, ಲಕ್ಷ್ಮಣ ಮತ್ತು ಮುನಿರಾಜು ಅವರ ಪುತ್ರ ಪ್ರಜ್ವಲ್ ಮೃತರು.ತಾಲ್ಲೂಕಿನಲ್ಲಿ ಉತ್ತಮ ಮಳೆ ಆಗುತ್ತಿದ್ದು 30 ವರ್ಷಗಳ ನಂತರ ಗ್ರಾಮದ ಕೆರೆಯು ತುಂಬಿದೆ.

ಶಾಲೆಯಿಂದ ಮನೆಗೆ ಬಂದ ನಂತರ ಮೂವರು ಮಕ್ಕಳು ಕೆರೆ ಬಳಿ ಆಟವಾಡಲು ತೆರಳಿದ್ದರು. ಈ ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದಾರೆ. ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.