ಚಿಕ್ಕಬಳ್ಳಾಪುರ: ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದಿಂದ ಅ. 8ರಂದು ಬೆಳಿಗ್ಗೆ 11ರಿಂದ 1ರವರೆಗೆ ಗೌರಿಬಿದನೂರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ನಡೆಯಲಿದೆ.
12 ರಂದು ಬೆಳಿಗ್ಗೆ 11ರಿಂದ 1ರವರೆಗೆ ಚಿಂತಾಮಣಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ, ಅ. 22 ರಂದು ಬೆಳಿಗ್ಗೆ 11ರಿಂದ 1ರವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಭೆನಡೆಯಲಿದೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ, ಸಿಬ್ಬಂದಿ ಸಾರ್ವಜನಿಕರ ಕೆಲಸ ಕಾರ್ಯದಲ್ಲಿ ವಿಳಂಬ ಮಾಡಿದರೆ, ಲಂಚ ಕೇಳಿದರೆ, ಭ್ರಷ್ಟಾಚಾರ ನಡೆಸಿದರೆ ಈ ಬಗ್ಗೆ ಸಾರ್ವಜನಿಕರು ನಿರ್ದಿಷ್ಟ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಿ ದೂರು ಅರ್ಜಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಬಹುದು ಎಂದು ಚಿಕ್ಕಬಳ್ಳಾಪುರ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಎಂ. ಪ್ರವೀಣ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.