ಅಪಘಾತ
–ಪ್ರಾತಿನಿಧಿಕ ಚಿತ್ರ
ಚಿಕ್ಕಬಳ್ಳಾಪುರ: ತಾಲ್ಲೂಕಿನ ಆವಲಗುರ್ಕಿ ಬಳಿ ಬುಧವಾರ ಸಂಜೆ ನಡೆದ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ಬಿಜಿಎಸ್ ಕಾಲೇಜಿನ ವಿದ್ಯಾರ್ಥಿಗಳಾದ ನಿತೀಶ್ (18), ನಿತಿನ್ (17), ಗುಡ್ಶೆಫರ್ಡ್ ಶಾಲೆಯ ವೈಭವ್ (16) ಮೃತರು. ಈ ಮೂವರು ಆವಲಗುರ್ಕಿ ಗ್ರಾಮದವರಾಗಿದ್ದಾರೆ.
ಚಿಕ್ಕಬಳ್ಳಾಪುರದಿಂದ ದ್ವಿಚಕ್ರ ವಾಹನದಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಟ್ರಾಕ್ಟರ್ ಟ್ರಾಲಿಗೆ ಹಿಂಭಾಗದಿಂದ ಬೈಕ್ ಡಿಕ್ಕಿಯಾಗಿದೆ. ತಕ್ಷಣವೇ ನಗರದ ಆಸ್ಪತ್ರೆಗೆ ಅವರನ್ನು ಚಿಕಿತ್ಸೆಗೆ ಕರೆತರಲಾಗಿದೆ. ತೀವ್ರ ರಕ್ತಸ್ರಾವವಾದ ಕಾರಣ ಮೂವರು ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.