ADVERTISEMENT

ಚಿಕ್ಕಬಳ್ಳಾಪುರ| ಚಿತ್ರಮಂದಿರಕ್ಕೆ ನಟ ಧ್ರುವ ಸರ್ಜಾ ಭೇಟಿ: ಲಘು ಲಾಠಿ ಪ್ರಹಾರ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 4:52 IST
Last Updated 27 ಫೆಬ್ರುವರಿ 2021, 4:52 IST
ನಟ ಧ್ರುವ ಸರ್ಜಾ ಅಭಿಮಾನಿಗಳತ್ತ ಕೈಬೀಸಿದರು
ನಟ ಧ್ರುವ ಸರ್ಜಾ ಅಭಿಮಾನಿಗಳತ್ತ ಕೈಬೀಸಿದರು   

ಚಿಕ್ಕಬಳ್ಳಾಪುರ: ನಗರದ ಬಾಲಾಜಿ ಚಿತ್ರಮಂದಿರಕ್ಕೆ ಶುಕ್ರವಾರ ‘ಪೊಗರು’ ಚಿತ್ರದ ನಟ ಧ್ರುವ ಸರ್ಜಾ ಭೇಟಿ ನೀಡಿದ್ದರು. ನೆಚ್ಚಿನ ನಟನನ್ನು ನೋಡಲು ನೂರಾರು ಮಂದಿ ಅಭಿಮಾನಿಗಳು ಮುಗಿಬಿದ್ದರು. ಇದೇ ವೇಳೆ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಧ್ರುವ ಸರ್ಜಾ ಮಾತನಾಡಿ, ಕನ್ನಡದ ಎಲ್ಲ ಚಲನಚಿತ್ರಗಳನ್ನು ಚಿತ್ರಮಂದರದಲ್ಲೇ ನೋಡುವಂತೆ ಮನವಿ ಮಾಡಿದರು. ಇಷ್ಟೊಂದು ಜನ ಅಭಿಮಾನಿಗಳನ್ನು ನೋಡಿ ಖುಷಿಯಾಯಿತು ಎಂದು ಸಂತಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT