ಚಿಕ್ಕಬಳ್ಳಾಪುರ: ಚದುಲಪುರ ಕ್ರಾಸ್ನ ಚೆಕ್ಪೋಸ್ಟ್ನಲ್ಲಿ ಸೋಮವಾರ ಮಧ್ಯಾಹ್ನ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹5 ಲಕ್ಷ ನಗದನ್ನು ಮಾದರಿ ನೀತಿ ಸಂಹಿತೆ (ಎಂಸಿಸಿ) ತಂಡದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ತಮಿಳುನಾಡಿನ ಹೊಸೂರಿನ ನಿವಾಸಿ ಸೈಯ್ಯದ್ ಎಂಬುವರು ಕಾರಿನಲ್ಲಿ ಚಿಕ್ಕಬಳ್ಳಾಪುರದಿಂದ ಬೆಂಗಳೂರಿನತ್ತ ಹೊರಟಿದ್ದ ವೇಳೆ ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸಿದ ವೇಳೆ ಹಣ ಪತ್ತೆಯಾಗಿದೆ. ಸೈಯ್ಯದ್ ಅವರು ವಾಹನ ಖರೀದಿಗೆ ಬೆಂಗಳೂರಿಗೆ ಹೊರಟಿದ್ದರು ಎನ್ನಲಾಗಿದೆ.
ಅಧಿಕಾರಿಗಳು ಜಪ್ತಿ ಮಾಡಿದ ಹಣವನ್ನು ಸಿಇಒ ನೇತೃತ್ವದ ಸಮಿತಿಗೆ ಒಪ್ಪಿಸಿದ್ದು, ಸಿಇಒ ಅವರು ಸಮರ್ಪಕ ದಾಖಲೆ ಸಲ್ಲಿಸುವಂತೆ ಸೈಯ್ಯದ್ ಅವರಿಗೆ ಸೂಚಿಸಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ನೀತಿ ಸಂಹಿತೆ ಸೋಮವಾರದಿಂದ ಪುನಃ ಜಾರಿಗೆ ಬರುತ್ತಿದ್ದಂತೆ ತಾಲ್ಲೂಕಿನಲ್ಲಿ 10 ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.