ADVERTISEMENT

ಪ್ರಾಣದೇವರ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 3:21 IST
Last Updated 9 ಮಾರ್ಚ್ 2021, 3:21 IST
ಮಾವಿನಕಾಯನಹಳ್ಳಿಯಲ್ಲಿ ಪೇಜಾವರದ ಶ್ರೀಗಳು ಮುಖ್ಯಪ್ರಾಣದೇವರಿಗೆ ವಿಶೇಷ ಪೂಜೆ ನೆರವೇರಿಸಿದರು
ಮಾವಿನಕಾಯನಹಳ್ಳಿಯಲ್ಲಿ ಪೇಜಾವರದ ಶ್ರೀಗಳು ಮುಖ್ಯಪ್ರಾಣದೇವರಿಗೆ ವಿಶೇಷ ಪೂಜೆ ನೆರವೇರಿಸಿದರು   

ಗೌರಿಬಿದನೂರು: ತಾಲ್ಲೂಕಿನ ಮಾವಿನಕಾಯನಹಳ್ಳಿಯಲ್ಲಿರುವ ವ್ಯಾಸರಾಯ ಪ್ರತಿಷ್ಠಾಪಿತ ಶ್ರೀಮುಖ್ಯ ಪ್ರಾಣದೇವರ 11ನೇ ವಾರ್ಷಿಕೋತ್ಸವ ಅದ್ದೂರಿಯಾಗಿ
ನೆರವೇರಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪೇಜಾವರದ ವಿಶ್ವ ಪ್ರಸನ್ನ ತೀರ್ಥ ಅವರು ಆಗಮಿಸಿ ಪೂಜಾ ಕೈಂಕಾರ್ಯಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಿದರು.

ಇದೇ ವೇಳೆ ಮಂಗಳವಾದ್ಯಗಳೊಂದಿಗೆ ಶ್ರೀಗಳು ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಆಗಮಿಸಿ, ಮುಖ್ಯ ಪ್ರಾಣದೇವರಿಗೆ ಪಂಚಾಮೃತ ಅಭಿಷೇಕ ನೆರವೇರಿಸಿದರು. ದೇವಾಲಯದಲ್ಲಿ ಭಕ್ತರು ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಸಂಸ್ಥಾನ ಪೂಜೆ ಮುಗಿಸಿ ಸ್ಥಳೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಿ ಅನುಗ್ರಹ ಸಂದೇಶ ನೀಡಿದರು. ನಂತರ ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡಿ ಪ್ರಸಾದ ಪಡೆದು ಫಲಮಂತ್ರಾಕ್ಷತೆಯನ್ನು ಭಕ್ತಾದಿಗಳಿಗೆ ವಿತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.