ADVERTISEMENT

ಬಾಬೂಜಿ ಸೇವೆ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 3:55 IST
Last Updated 6 ಏಪ್ರಿಲ್ 2021, 3:55 IST
ಚಿಂತಾಮಣಿ ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ನಡೆದ ಡಾ.ಬಾಬು ಜಗಜೀವನ ರಾಂ ಜಯಂತಿಯಲ್ಲಿ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಿಸಲಾಯಿತು
ಚಿಂತಾಮಣಿ ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ನಡೆದ ಡಾ.ಬಾಬು ಜಗಜೀವನ ರಾಂ ಜಯಂತಿಯಲ್ಲಿ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಿಸಲಾಯಿತು   

ಚಿಂತಾಮಣಿ: ‘ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ ರಾಂ ನಿಪುಣ ಆಡಳಿತಗಾರರಾಗಿದ್ದರು’ ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿ. ರಾಮಪ್ಪ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ ರಾಂ ಅವರ 114ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶೋಷಿತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಿದ ಮಹಾನ್ ನಾಯಕ. ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿ ಉತ್ತಮ ಆಡಳಿತಗಾರ, ವಾಕ್ಪಟುವಾಗಿದ್ದರೂ ಪರಿಶಿಷ್ಟ ಜಾತಿಯ ಕಾರಣದಿಂದ ದೇಶದ ಪ್ರಧಾನಿ ಪಟ್ಟವನ್ನು ತಪ್ಪಿಸಲಾಯಿತು ಎಂದು ನುಡಿದರು.

ADVERTISEMENT

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲೇಖನ ಸಾಮಗ್ರಿ ವಿತರಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಕಾರ್ಯದರ್ಶಿ ವೆಂಕಟೇಶ್, ಪದಾಧಿಕಾರಿಗಳಾದ ನಾಗಪ್ಪ, ವೆಂಕಟರಾಯಪ್ಪ, ಸೋಮ ಶೇಖರ್, ಆಂಜನಪ್ಪ, ಆನಂದ್, ನರಸಿಂಹಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.