ಬಾಗೇಪಲ್ಲಿ: ತಾಲ್ಲೂಕಿನ ಲಘುಮದ್ದೇಪಲ್ಲಿ ಕ್ರಾಸ್ ಬಳಿ ಸೋಮವಾರ ಬೆಳಗಿನ ಜಾವ ದ್ವಿಚಕ್ರ ವಾಹನ ಸವಾರರೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.
ತಾಲ್ಲೂಕಿನ ಗೂಳೂರು ಹೋಬಳಿಯ ಕೊತ್ತಕೋಟೆ ಗ್ರಾಮ ಪಂಚಾಯಿತಿಯ ಜಿಲ್ಲಾಲಪಲ್ಲಿ ಗ್ರಾಮದ ಸಮೀವುಲ್ಲಾ(45) ಮೃತಪಟ್ಟವರು.
ಸಮೀವುಲ್ಲಾ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಸೋಮವಾರ ಬೆಳಗಿನ ಜಾವ ಬಾಗೇಪಲ್ಲಿಯಿಂದ ಪಾತಪಾಳ್ಯದ ಮೂಲಕ ತೆರಳುತ್ತಿದ್ದರು. ಈ ವೇಳೆ ಲಘುಮದ್ದೇಮಪಲ್ಲಿ ಕ್ರಾಸ್ ಬಳಿ ರಸ್ತೆಯಲ್ಲಿ ಬಿದ್ದಿದ್ದ ಬೃಹತ್ ಗುಂಡಿಯಲ್ಲಿ ಆಯತಪ್ಪಿ ಬಿದ್ದು, ತೀವ್ರ ಪೆಟ್ಟಾಗಿದ್ದರಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.