ADVERTISEMENT

ಭಾಗ್ಯನಗರಕ್ಕೆ ಆದೇಶ ಕರವೇ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2021, 5:10 IST
Last Updated 8 ಫೆಬ್ರುವರಿ 2021, 5:10 IST
ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ಕರವೇ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು
ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ಕರವೇ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು   

ಬಾಗೇಪಲ್ಲಿ: ‘ಬಾಗೇಪಲ್ಲಿ’ಯನ್ನು ‘ಭಾಗ್ಯನಗರ’ ಎಂದು ಮರುನಾಮಕರಣ ಮಾಡಲು ಸರ್ಕಾರ ಜಿಲ್ಲಾಧಿಕಾರಿಯವರಿಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಕರ್ನಾಟಕ ರಕ್ಷಣಾವೇದಿಕೆಯ ತಾಲ್ಲೂಕು ಅಧ್ಯಕ್ಷ ಬಿ.ಎ.ಬಾಬಾಜಾನ್ ನೇತೃತ್ವದಲ್ಲಿ ಕಾರ್ಯಕರ್ತರು ಬಸ್ ನಿಲ್ದಾಣದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಿ.ಎ.ಬಾಬಾಜಾನ್ ಮಾತನಾಡಿ, ‘ಅನೇಕ ಪ್ರಗತಿಪರ, ದಲಿತ, ಕನ್ನಡ ಪರ ಸಂಘಟನೆಗಳು ಹೋರಾಟಗಳನ್ನು ಮಾಡಿ, ಬಾಗೇಪಲ್ಲಿ ಎಂಬ ತೆಲುಗು ಪದವನ್ನು ತೆಗೆದು ‘ಭಾಗ್ಯನಗರ’ ಎಂದು ಮರುನಾಮಕರಣ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಹೋರಾಟ ಮಾಡಿದ್ದಾರೆ’ ಎಂದು ತಿಳಿಸಿದರು.

‘ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಬಾಗೇಪಲ್ಲಿಯನ್ನು ಭಾಗ್ಯನಗರ ಮಾಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದರು. ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಎಸ್. ಗುರುಮೂರ್ತಿರವರು ಜ.27ರಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯವರಿಗೆ ಪತ್ರವನ್ನು ಕಳಿಸಿದ್ದು, ಬಾಗೇಪಲ್ಲಿ ಎಂಬ ಪಟ್ಟಣದ ಹೆಸರನ್ನು ‘ಭಾಗ್ಯನಗರ’ ಎಂದು ಬದಲಾವಣೆ ಮಾಡುವ ಬಗ್ಗೆ ಸೂಚನೆ ನೀಡಿರುವುದು ಸ್ವಾಗತಾರ್ಹವಾಗಿದೆ’ ಎಂದರು.

ADVERTISEMENT

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಸುಧಾಕರ್, ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಭಿನಂದನೆ ಸಲ್ಲಿಸಿದರು. ಕನ್ನಡಸೇನೆ ತಾಲ್ಲೂಕು ಅಧ್ಯಕ್ಷ ರವೀಂದ್ರ, ರಂಗನಾಥ, ಷೇಕ್ ಹಿದಾಯಿತ್ತುಲ್ಲಾ, ಶಾಂತಿ, ವೆಂಕಟೇಶ್, ಸಲೀಂ ಮಂಜುನಾಥ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.