ADVERTISEMENT

ಚಿಕ್ಕಬಳ್ಳಾಪುರ: ಬೈಕ್ ಕಳ್ಳರಿಂದ ಗ್ರಾಮಸ್ಥರ ಮೇಲೆ ಗುಂಡಿನ ದಾಳಿ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 17:07 IST
Last Updated 27 ಸೆಪ್ಟೆಂಬರ್ 2021, 17:07 IST
ಐಸ್ಟಾಕ್ ಚಿತ್ರ
ಐಸ್ಟಾಕ್ ಚಿತ್ರ   

ಚಿಕ್ಕಬಳ್ಳಾಪುರ: ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಮರವೇನಹಳ್ಳಿ ಗ್ರಾಮದಲ್ಲಿ ಕಳ್ಳರು ಗ್ರಾಮಸ್ಥರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಇಬ್ಬರು ಕಳ್ಳರು ಗ್ರಾಮದಲ್ಲಿ ಬೈಕ್ ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಹಿಡಿಯಲು ಗ್ರಾಮಸ್ಥರು ಮುಂದಾಗಿದ್ದಾರೆ. ಆಗ ಕಳ್ಳರು ಗ್ರಾಮಸ್ಥರ ಮೇಲೆ ಗುಂಡು ಹಾರಿಸಿ ಪರಾರಿ ಆಗಿದ್ದಾರೆ.

ಗ್ರಾಮಸ್ಥ ಗಂಗಾಧರ್ ಅವರ ಹೊಟ್ಟೆಗೆ ಗುಂಡು ತಗುಲಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.