ADVERTISEMENT

ಚಿಕ್ಕಬಳ್ಳಾಪುರದಲ್ಲಿ ಬಸ್ ಸಂಚಾರ ಆರಂಭವಾದರೂ ಪ್ರಯಾಣಿಕರ ಸಂಖ್ಯೆ ವಿರಳ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 6:48 IST
Last Updated 21 ಜೂನ್ 2021, 6:48 IST
   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಲಾಕ್ ಡೌನ್ ತೆರವಾಗಿದ್ದು ಬಸ್ ಸಂಚಾರ ಆರಂಭವಾಗಿದೆ. ಬೆಳಿಗ್ಗೆ 11.30ರವರೆಗೆ ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಘಟಕದಿಂದ 28 ಬಸ್ ಗಳು ಸಂಚಾರ ಆರಂಭಿಸಿವೆ

ಜಿಲ್ಲಾ ಕೇಂದ್ರದ ಬಸ್ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರೇನೂ ಇಲ್ಲ.

ವಾಣಿಜ್ಯ ಚಟುವಟಿಕೆಗಳು ಹೆಚ್ಚಿವೆ. ಕೋವಿಡ್ ಪೂರ್ವದಲ್ಲಿ ಇದ್ದಂತೆಯೇ ಜನ ಸಂಚಾರವಿದೆ.

ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ವಿಭಾಗದಲ್ಲಿ ಪ್ರತಿ ಘಟಕದಿಂದ 30 ಬಸ್ ಓಡಿಸಬೇಕು ಎಂದುಕೊಂಡಿದ್ದೇವೆ. ಪ್ರಯಾಣಿಕರ ಸಂಖ್ಯೆ ಆಧರಿಸಿ ಸಂಖ್ಯೆ ಹೆಚ್ಚಬಹುದು ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.