ADVERTISEMENT

ಉಪ ಚುನಾವಣೆ: ವೀಕ್ಷಕರ ನೇಮಕ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2019, 15:03 IST
Last Updated 2 ಆಗಸ್ಟ್ 2019, 15:03 IST

ಚಿಕ್ಕಬಳ್ಳಾಪುರ: ಶಾಸಕರಾಗಿದ್ದ ಡಾ.ಕೆ.ಸುಧಾಕರ್ ಅವರ ರಾಜೀನಾಮೆಯಿಂದ ಉಪ ಚುನಾವಣೆ ನಡೆಯಲಿರುವ ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರಕ್ಕೆ ಕೆಪಿಸಿಸಿ ಶುಕ್ರವಾರ ನಾಲ್ಕು ಮುಖಂಡರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ.

ಶಾಸಕರಾದ ಎನ್.ಎಚ್.ಶಿವಶಂಕರರೆಡ್ಡಿ, ವಿ.ಮುನಿಯಪ್ಪ, ಎಸ್.ಎನ್.ಸುಬ್ಬಾರೆಡ್ಡಿ ಮತ್ತು ಮಾಜಿ ಶಾಸಕ ಎನ್.ಸಂಪಂಗಿ ಅವರನ್ನು ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ವೀಕ್ಷಕರನ್ನಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT