ಚಿಂತಾಮಣಿ: ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರಿನ ಯೆನೆಪೋಯಾ ವಿಶ್ವವಿದ್ಯಾಲಯ ಹಾಗೂ ನಗರದ ಮೆಗಾ ಫ್ಯಾನ್ಸ್ ಅಸೋಸಿಯೇಷನ್ನಿಂದ ನ. 14ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 3ಗಂಟೆವರೆಗೆ ತಾಲ್ಲೂಕಿನ ಕೈವಾರದ ಅಂಜುಮಾನ್ ಷಾದಿ ಮಹಲ್ನಲ್ಲಿ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ, ರಕ್ತದೊತ್ತಡ, ಮಧುಮೇಹ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಶಿಬಿರದಲ್ಲಿ ತಜ್ಞ ವೈದ್ಯರು ಉಚಿತ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ, ಸ್ತ್ರೀರೋಗ ತಪಾಸಣೆ, ಚರ್ಮರೋಗ, ಕಿವಿ, ಮೂಗು, ಗಂಟಲು ಮತ್ತು ಕಿವಿ ತಪಾಸಣೆ, ದಂತ ತಪಾಸಣೆ, ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ಮಾಡುತ್ತಾರೆ. ಉಚಿತವಾಗಿ ಔಷಧಿ ಸಹ ವಿತರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.