ADVERTISEMENT

ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ಆರ್‌. ಲತಾ ಗ್ರಾಮ ವಾಸ್ತವ್ಯ ಆರಂಭ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 9:56 IST
Last Updated 20 ಫೆಬ್ರುವರಿ 2021, 9:56 IST
   

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ಆನೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೋದಗೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಶನಿವಾರ ಬೆಳಿಗ್ಗೆ ಗ್ರಾಮ ವಾಸ್ತವ್ಯ ಆರಂಭಿಸಿದ್ದಾರೆ.

ಚಿಕ್ಕಬಳ್ಳಾಪುರದಿಂದ ಬೋದಗೂರು ಗ್ರಾಮಕ್ಕೆ ಬಂದಿಳಿದ ಆರ್.ಲತಾ ಅವರು ಮೊದಲಿಗೆ ಗ್ರಾಮದಲ್ಲಿನ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ, ಪೂಜೆ ಸಲ್ಲಿಸಿದರು. ದೇವಸ್ಥಾನದ ಮುಂಭಾಗದಲ್ಲಿ ತೆರೆದಿರುವ ಸಾವಯವ ಹಾಗೂ ಸಿರಿಧಾನ್ಯ ಮಳಿಗೆಗಳಿಗೆ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದರು.

ಇದೇ ವೇಳೆ ಮಾತನಾಡಿದ ಅವರು, ‘ರೈತರು ಬೆಳೆಯುವ ಸಿರಿಧಾನ್ಯಗಳಿಗೆ ಜಿಲ್ಲೆಯಲ್ಲಿ ಹೊಸದಾಗಿ ಒಂದು ಬ್ರ್ಯಾಂಡ್‌ ರೂಪ ನೀಡಿ ರಫ್ತಿಗೆ ಉತ್ತೇಜನ ನೀಡಲಾಗುವುದು’ ಎಂದು ಭರವಸೆ ನೀಡಿದರು.

ಬಳಿಕ ಎಸ್‍ಸಿ, ಎಸ್‍ಟಿ ಕಾಲೊನಿಗಳಿಗೆ ಭೇಟಿ ನೀಡಿ ದ್ದು, ಗ್ರಾಮಸ್ಥರ ಅಹವಾಲು ಆಲಿಸುತ್ತಿದ್ದಾರೆ. ವಿವಿಧ ಇಲಾಖಾ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.