ADVERTISEMENT

ಚಿಕ್ಕಬಳ್ಳಾಪುರ ಜಿಲೆಟಿನ್‌ ಸ್ಫೋಟ ದುರಂತ: ಐದು ಮಂದಿಯ ‌ಬಂಧನ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 10:01 IST
Last Updated 24 ಫೆಬ್ರುವರಿ 2021, 10:01 IST
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು   

ಚಿಕ್ಕಬಳ್ಳಾಪುರ: ಜಿಲ್ಲೆಯ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಜಿಲೆಟಿನ್‌ ಸ್ಫೋಟ ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ತಡರಾತ್ರಿ ನಡೆದ ಸ್ಫೋಟ ದುರಂತದಲ್ಲಿ 6 ಮಂದಿ ಕಾರ್ಮಿಕರು ಮೃತಪಟ್ಟಿದ್ದರು.

ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಗೋರಂಟ್ಲದಲ್ಲಿ ತಲೆಮೆರೆಸಿಕೊಂಡಿದ್ದ ಪ್ರಕರಣದ ಎರಡನೇ ಆರೋಪಿ, ಗಣಿ ಮಾಲೀಕ ರಾಘವೇಂದ್ರ ರೆಡ್ಡಿ, ನಾಲ್ಕನೇ ಆರೋಪಿ ವೆಂಕಟಶಿವಾ ರೆಡ್ಡಿ, ಐದನೇ ಆರೋಪಿ ಪ್ರವೀಣ್, ಏಳನೇ ಆರೋಪಿ ಚಾಲಕ ರಿಯಾಜ್ ಮತ್ತು ಹದಿನಾಲ್ಕನೇ ಆರೋಪಿ ಮಧುಸೂದನ್ ರೆಡ್ಡಿ ಅವರನ್ನು ಬಂಧಿಸಿದ್ದಾರೆ.

ಮತ್ತೊಬ್ಬ ಆರೋಪಿ ಬಿಜೆಪಿ ಮುಖಂಡ ಹಾಗೂ ರೈಲ್ವೆ ಸಮಿತಿ ಸದಸ್ಯ ಗುಡಿಬಂಡೆ ನಾಗರಾಜ್‌ಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ವೆಂಕಟಶಿವಾ ರೆಡ್ಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.