ADVERTISEMENT

ಚಿಕ್ಕಬಳ್ಳಾಪುರ ಸ್ಫೋಟ ದುರಂತ: ಕರ್ತವ್ಯ ಲೋಪ ಎಸಗಿದ ಪಿಐ, ಪಿಎಸ್‌ಐ ಅಮಾನತು

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 10:25 IST
Last Updated 24 ಫೆಬ್ರುವರಿ 2021, 10:25 IST
ಪೊಲೀಸ್ ಅಧಿಕಾರಿಗಳ ಅಮಾನತು
ಪೊಲೀಸ್ ಅಧಿಕಾರಿಗಳ ಅಮಾನತು    

ಚಿಕ್ಕಬಳ್ಳಾಪುರ: ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಗುಡಿಬಂಡೆ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್ ಹಾಗೂ ಗುಡಿಬಂಡೆ ಗ್ರಾಮೀಣ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಗೋಪಾಲ ರೆಡ್ಡಿ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್ ಅಮಾನತುಗೊಳಿಸಿದ್ದಾರೆ.

ತಾಲ್ಲೂಕಿನ ಹಿರೇನಾಗವಲ್ಲಿ ಗ್ರಾಮದ ಬಳಿ ಅಕ್ರಮ ಕಲ್ಲು ಗಣಗಾರಿಕೆ ಮತ್ತು ಸ್ಫೋಟಕಗಳ ದಾಸ್ತಾನು ಕುರಿತು ಫೆ.7 ರಂದು ಭ್ರಮರವಾಸಿನಿ ಕಷರ್‌ ಮೇಲೆ ದಾಳಿ ನಡೆಸಿ ಮಾಲೀಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿತ್ತು. ಆದರೆ, ಪ್ರಕರಣ ದಾಖಲು ಮಾಡಿದರೂ ಕೂಡ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾದ ಕಾರಣಕ್ಕೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ಓದು...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.