ADVERTISEMENT

ಚಿಕ್ಕಬಳ್ಳಾಪುರ: ಕ್ವಾರಿ ಹೊಂಡದಲ್ಲಿ ಮುಳುಗಿ ತಾಯಿ, ಮಗಳು ಸಾವು

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 11:07 IST
Last Updated 9 ಮಾರ್ಚ್ 2021, 11:07 IST

ಚಿಕ್ಕಬಳ್ಳಾಪುರ: ತಾಲ್ಲೂಕಿನ ಹಾರೋಬಂಡೆ ಬಳಿಯ ಕಲ್ಲು ಕ್ವಾರಿಯ ಹೊಂಡದಲ್ಲಿ ಮುಳಗಿ ಮಂಗಳವಾರ ತಾಯಿ, ಮಗಳು ಮೃತಪಟ್ಟಿದ್ದಾರೆ. ಪೂಜಾ (30), ಮಂಜುಳಾ (8) ಮೃತರು.

10 ವರ್ಷಗಳ ಹಿಂದೆ ಇಲ್ಲಿ ಕಲ್ಲು ಕ್ವಾರಿ ನಡೆಯುತ್ತಿತ್ತು. ಕ್ವಾರಿಯಿಂದ ನಿರ್ಮಾಣವಾದ ಗುಂಡಿಯಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ಪೂಜಾ ಅವರು ಬಟ್ಟೆ ತೊಳೆಯಲು ತನ್ನ ಇಬ್ಬರು ಮಕ್ಕಳ ಜತೆ ಈ ಹೊಂಡದ ಬಳಿ ತೆರಳಿದ್ದರು.

ಮಂಜುಳಾ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾಳೆ. ಆಕೆಯನ್ನು ರಕ್ಷಿಸಲು ಪೂಜಾ ಸಹ ಮುಂದಾಗಿದ್ದು ಅವರೂ ಮುಳುಗಿದ್ದಾರೆ ಎಂದು ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.