ಚಿಕ್ಕಬಳ್ಳಾಪುರ: ನಗರದ ಎಪಿಎಂಸಿ ವಾರ್ಡ್ ನಲ್ಲಿ ಭಾನುವಾರ ಬೆಳಿಗ್ಗೆ ಗೃಹಿಣಿಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ವಿಷ ನೀಡಿ ಸಾಯಿಸಿ, ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿಕ್ಷಕ ಅಶ್ವಥ್ ಎಂಬುವರ ಪತ್ನಿ ಉಷಾ(28) ಅವರು ಮಕ್ಕಳಾದ ಸುಮಂತ್(8) ಶಾಲಿನಿ(5) ಅವರಿಗೆ ತಿಂಡಿಯಲ್ಲಿ ವಿಷ ಹಾಕಿ ತಿನ್ನಿಸಿದ್ದಾರೆ.
ಕೌಟುಂಬಿಕ ಕಲಹದಿಂದ ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.