ADVERTISEMENT

ಚಿಕ್ಕನಾಯಕನಹಳ್ಳಿ: ಕೃಷಿ ಪ್ರಶಸ್ತಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2024, 16:03 IST
Last Updated 26 ಆಗಸ್ಟ್ 2024, 16:03 IST
ನಾಟಿಗಾಗಿ ರಾಗಿ ಸಸಿಗಳನ್ನು ಕಿತ್ತು ಹೊಲಕ್ಕೆ ಸಾಗಿಸುತ್ತಿರುವ ರೈತರು
ನಾಟಿಗಾಗಿ ರಾಗಿ ಸಸಿಗಳನ್ನು ಕಿತ್ತು ಹೊಲಕ್ಕೆ ಸಾಗಿಸುತ್ತಿರುವ ರೈತರು   

ಚಿಕ್ಕನಾಯಕನಹಳ್ಳಿ: ರಾಗಿ ಬೆಳೆಗೆ ಕೃಷಿ ಪ್ರಶಸ್ತಿ ನೀಡುವ ಯೋಜನೆಯನ್ನು ಕೃಷಿ ಇಲಾಖೆ ಹಮ್ಮಿಕೊಂಡಿದೆ. ಪ್ರಶಸ್ತಿಗೆ ಈಗಾಗಲೇ ಅರ್ಜಿ ಆಹ್ವಾನಿಸಿದ್ದು, ಆ.31 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಎಂದು ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

ಕೃಷಿ ಪ್ರಶಸ್ತಿ ಸ್ಪರ್ಧೆಗೆ ಆಸಕ್ತ ರೈತರು ಹಾಗೂ ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಾರ್ವಜನಿಕ ಸೇವಾ ಕೇಂದ್ರದ ಮೂಲಕ ಆನ್‌ಲೈನ್ ತಂತ್ರಾಂಶದಲ್ಲಿ ಆ.31 ರೊಳಗೆ ನೊಂದಾಯಿಸಬಹುದು. ಅಗತ್ಯ ಪ್ರಮಾಣ ಪತ್ರಗಳನ್ನು ಆನ್‌ಲೈನ್ ತಂತ್ರಾಂಶದಲ್ಲಿ ದಾಖಲಿಸಬೇಕು.

ಹೆಚ್ಚಿನ ಮಾಹಿತಿಗೆ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ಕಚೇರಿ ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.