ADVERTISEMENT

ಚಿಂತಾಮಣಿ | ಚೀಟಿ ಹಣದ ವಿಚಾರಕ್ಕೆ ಗುಂಪುಗಳ ನಡುವೆ ಗಲಾಟೆ: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 5:19 IST
Last Updated 16 ಜುಲೈ 2025, 5:19 IST
<div class="paragraphs"><p>ಗುಂಪು ಹಲ್ಲೆ</p></div>

ಗುಂಪು ಹಲ್ಲೆ

   

– ಗೆಟ್ಟಿ ಚಿತ್ರ

ಚಿಂತಾಮಣಿ: ಚೀಟಿ ಹಣದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆನೂರು ಗ್ರಾಮದಲ್ಲಿ ನಡೆದಿದೆ.

ADVERTISEMENT

ಆನೂರು ಗ್ರಾಮದ ಕೀರ್ತರಾಜು ಮತ್ತು ಅದೇ ಗ್ರಾಮದ ವೆಂಕಟೇಶ್ ನಡುವೆ ಚೀಟಿ ಹಣದ ವ್ಯವಹಾರವಿದ್ದು, ಹಣದ ವಿಷಯದಲ್ಲಿ ಇಬ್ಬರ ನಡುಗೆ ಭಿನ್ನಾಭಿಪ್ರಾಯದಿಂದ ಗಲಾಟೆ ಆಗಿತ್ತು ಎನ್ನಲಾಗಿದೆ.

ಸೋಮವಾರ ಸಂಜೆ ವೆಂಕಟೇಶ್ ಎಂಬಾತ ಗುಂಪು ಕಟ್ಟಿಕೊಂಡು ಬಂದು ಕೀರ್ತರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲಿಗೆ ಒಳಗಾದ ಕೀರ್ತರಾಜ್ ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘರ್ಷಣೆಯಲ್ಲಿ ವೆಂಕಟೇಶ್ ತಾಯಿ ಸಹ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಮೇಲೆಯೂ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಗ್ರಾಮಾಂತರ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಎರಡು ಗುಂಪುಗಳ ಹೇಳಿಕೆ ಪಡೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.