ADVERTISEMENT

ಚಿಂತಾಮಣಿ | ಆರೋಗ್ಯ ತಪಾಸಣೆ ಶಿಬಿರ ನಾಳೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 5:57 IST
Last Updated 23 ಆಗಸ್ಟ್ 2025, 5:57 IST
<div class="paragraphs"><p>ಚಿತ್ರ ಕೃಪೆ: ಪ್ರಾತಿನಿಧಿಕ ಚಿತ್ರ</p></div>

ಚಿತ್ರ ಕೃಪೆ: ಪ್ರಾತಿನಿಧಿಕ ಚಿತ್ರ

   

ಚಿಂತಾಮಣಿ: ತಾಲ್ಲೂಕಿನ ಕೈವಾರ ಗ್ರಾಮದ ಯೋಗಿನಾರಾಯಣ ಮಠ ಮತ್ತು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆ ಆಶ್ರಯದಲ್ಲಿ ಆಗಸ್ಟ್‌ 24 ರಂದು ಭಾನುವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಯೋಗಿನಾರೇಯಣ ಮಠದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ಸಾಮಾನ್ಯ ರೋಗ, ಮಕ್ಕಳ ವಿಭಾಗ, ಚರ್ಮರೋಗ, ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ, ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗ, ಕ್ಯಾನ್ಸರ್‌, ಕಿವಿ, ಮೂಗು, ಗಂಟಲು ವಿಭಾಗ, ಮೂಳೆ ಮತ್ತು ಕೀಲು ರೋಗ ವಿಭಾಗ, ಸ್ತ್ರೀರೋಗ ವಿಭಾಗ, ಹಲ್ಲಿನ ಚಿಕಿತ್ಸಾ ವಿಭಾಗದ ನುರಿತ ತಜ್ಞ ವೈದ್ಯರು ಭಾಗವಹಿಸಿ ತಪಾಸಣೆ ನಡೆಸುತ್ತಾರೆ.

ADVERTISEMENT

ಶಿಬಿರಕ್ಕೆ ಬರುವಾಗ ಬಿಪಿಎಲ್‌ ಕಾರ್ಡ್‌, ಆಧಾರ್‌ ಪ್ರತಿ ಹಾಗೂ ಮೊಬೈಲ್‌ ನಂಬರ್‌ ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗೆ: 080-40502693, 8884412753 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.