ADVERTISEMENT

ಚಿಂತಾಮಣಿ: ವಾಹನ ಡಿಕ್ಕಿ ಓರ್ವ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2023, 5:25 IST
Last Updated 26 ಫೆಬ್ರುವರಿ 2023, 5:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಂತಾಮಣಿ: ತಾಲ್ಲೂಕಿನ ಚೇಳೂರು ರಸ್ತೆ ಕನಿಶೆಟ್ಟಹಳ್ಳಿ ಕ್ರಾಸ್ ಬಳಿ ಶನಿವಾರ ಬಟ್ಲಹಳ್ಳಿ ಠಾಣೆ ಪೊಲೀಸ್ ಜೀಪ್ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಟಗಲ್ ನಿವಾಸಿ ಮುನಿಯಪ್ಪ(33) ಮೃತರು. ಸಬ್ ಇನ್‌ ಸ್ಪೆಕ್ಟರ್ ನಾರಾಯಣಸ್ವಾಮಿ ಮತ್ತು ಜೀಪ್ ಚಾಲಕ ವಿಜಯಕುಮಾರ್ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಮುನಿಯಪ್ಪ ಕೋಟಗಲ್‌ನಿಂದ ದ್ವಿಚಕ್ರ ವಾಹನದಲ್ಲಿ ಕೂಲಿ ಕೆಲಸಕ್ಕಾಗಿ ಚಿಂತಾಮಣಿಗೆ ಬರುತ್ತಿದ್ದರು. ಕನಿಶೆಟ್ಟಹಳ್ಳಿ ಕ್ರಾಸ್ ಬಳಿ ಎರಡು ವಾಹನಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚೆಂಚಾರ್ಲಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT