ADVERTISEMENT

ಸರ್ಕಾರಿ ಜಮೀನು ಒತ್ತುವರಿ ತೆರವು

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2021, 4:49 IST
Last Updated 2 ಮಾರ್ಚ್ 2021, 4:49 IST
ಶಿಡ್ಲಘಟ್ಟ ತಾಲ್ಲೂಕಿನ ಬಳುವನಹಳ್ಳಿ ಗ್ರಾಮದಲ್ಲಿ 24 ಗುಂಟೆ ಜಮೀನನ್ನು ಅಧಿಕಾರಿಗಳು ತೆರವುಗೊಳಿಸಿದರು
ಶಿಡ್ಲಘಟ್ಟ ತಾಲ್ಲೂಕಿನ ಬಳುವನಹಳ್ಳಿ ಗ್ರಾಮದಲ್ಲಿ 24 ಗುಂಟೆ ಜಮೀನನ್ನು ಅಧಿಕಾರಿಗಳು ತೆರವುಗೊಳಿಸಿದರು   

ಶಿಡ್ಲಘಟ್ಟ : ತಾಲ್ಲೂಕಿನ ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳುವನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನಿನ ಒತ್ತುವರಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು. ಸರ್ವೆ ನಂ.215ರಲ್ಲಿ 24 ಗುಂಟೆ ಜಮೀನನ್ನು ವಶಪಡಿಸಿಕೊಂಡಿದ್ದಾರೆ.

ತಹಶೀಲ್ದಾರ್ ರಾಜೀವ್ ಅವರ ಮಾರ್ಗದರ್ಶನದಲ್ಲಿ ಜಂಗಮಕೋಟೆ ನಾಡ ಕಚೇರಿಯ ಉಪ ತಹಶೀಲ್ದಾರ್ ನಾಗರಾಜ್, ಪಿಡಿಓ ಅರುಣಾಕುಮಾರಿ ಅವರು ಪೋಲಿಸರ ಸಹಕಾರದಿಂದ ಕಾರ್ಯಚರಣೆ ನಡೆಸಿ ಗೋಮಾಳವನ್ನು ಸಂರಕ್ಷಣೆ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ದೇವರಾಜ್, ಉಪಾಧ್ಯಕ್ಷ ನಾರಾಯಣಸ್ವಾಮಿ, ಪಿಡಿಓ ಅರುಣಾಕುಮಾರಿ, ಗ್ರಾಮ ಪಂಚಾಯಿತಿ ಸದಸ್ಯ ಮಿತ್ತನಹಳ್ಳಿ ಹರೀಶ್, ವೆಂಕಟಾಪುರ ನಾಗೇಶ್ ಇದ್ದರು.

ADVERTISEMENT

ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ಶ್ರೀಧರ್, ಗ್ರಾಮ ಸಹಾಯಕ ವೆಂಕಟೇಶ್, ಭೂಮಾಪಕ ಚಂದ್ರಶೇಖರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.