ADVERTISEMENT

ವಂಚಕರಿಗೆ ಮಣೆ ಹಾಕಿದ್ದಕ್ಕೆ ಕಾಂಗ್ರೆಸ್‌ ಅಧೋಗತಿ

ಬಿಜೆಪಿ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ.ಅಂಜನಪ್ಪ ವೈಯಕ್ತಿಕ ನಿಂದನೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2019, 11:38 IST
Last Updated 11 ಡಿಸೆಂಬರ್ 2019, 11:38 IST
ನಂದಿ ಆಂಜನಪ್ಪ
ನಂದಿ ಆಂಜನಪ್ಪ   

ಚಿಕ್ಕಬಳ್ಳಾಪುರ: ‘ಕಾಂಗ್ರೆಸ್‌ಗೆ ಹೇಗೆ ದ್ರೋಹ ಮಾಡಬೇಕು ಎಂದು ಕಾಂಗ್ರೆಸ್ ಶಾಸಕರಿಗೆ ಕಲಿಸಿದ ಎಸ್‌.ಎಂ.ಕೃಷ್ಣ ಅವರಂತಹ ವಂಚಕರಿಗೆ ಮಣೆ ಹಾಕಿದ ಕಾರಣಕ್ಕೆ ಕಾಂಗ್ರೆಸ್‌ ಇವತ್ತು ಇಂತಹ ಸ್ಥಿತಿ ಬಂದಿದೆ’ ಎಂದು ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ.ಅಂಜನಪ್ಪ ಅವರು ವಾಗ್ದಾಳಿ ನಡೆಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏನು ಗತಿ ಇಲ್ಲದವರನ್ನು ತಂದು ಕಾಂಗ್ರೆಸ್‌ ಮುಖ್ಯಮಂತ್ರಿ, ಕೇಂದ್ರ ಸಚಿವರು, ರಾಜ್ಯಪಾಲರನ್ನಾಗಿ ಮಾಡಿತು. ಮೂರು ಕಾಸಿನ ಯೋಗ್ಯತೆ ಇಲ್ಲದವರು 86 ವಯಸ್ಸಿನಲ್ಲಿ ಪಕ್ಷಕ್ಕೆ ದ್ರೋಹ ಮಾಡಿ ಹೋದರು. ತಾಯಿಗೆ ಮೋಸ ಮಾಡುವ ಇಂತಹವರಿಂದಲೇ ಪಕ್ಷಕ್ಕೆ ಹಾನಿಯಾಗಿದೆ’ ಎಂದು ಆರೋಪಿಸಿದರು.

‘ಉಪ ಚುನಾವಣೆಯಲ್ಲಿ ಬಿಜೆಪಿ ಹಣಬಲ, ಅಧಿಕಾರ ದುರುಪಯೋಗಪಡಿಸಿಕೊಂಡು ಗೆಲುವು ಸಾಧಿಸಿದೆ. ನಾವು ಕಾಂಗ್ರೆಸ್‌ನ್ನು ಮತ್ತೆ ಸಂಘಟಿಸಿ ಮೇಲೆತ್ತುವ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.