ಚಿಕ್ಕಬಳ್ಳಾಪುರ: ಜನಧ್ವನಿ ಯಾತ್ರೆಗೆ ಬಂದಿರುವ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನೊ ಮೊಳಗಿಸಿದ್ದಾರೆ.
ಅನ್ನದಾತರ ಧ್ವನಿ ಕೇಳದ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರ ಸರ್ವನಾಶವಾಗಲಿದೆ. ಯಡಿಯೂರಪ್ಪನಿಗೆ, ನರೇಂದ್ರ ಮೋದಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.
ಸರ್ಕಾರದ ವಿರುದ್ಧ ಬಿತ್ತಿಪತ್ರಗಳನ್ನು ಪ್ರದರ್ಶಿಸಿದರು.
ಬಿಬಿ ರಸ್ತೆ ಜಾಮ್: ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಟ್ರಾಕ್ಟರ್, ಎತ್ತಿನ ಬಂಡಿಗಳು ಸೇರಿರುವುದರಿಂದ ಬಿಬಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.