ADVERTISEMENT

ಚಿಕ್ಕಬಳ್ಳಾಪುರ: ಸರ್ವರಿಗೂ ಹಕ್ಕು, ಶಕ್ತಿ ನೀಡಿದ್ದು ಸಂವಿಧಾನ: ಸು.ಧಾ.ವೆಂಕಟೇಶ್

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 5:01 IST
Last Updated 27 ಜನವರಿ 2023, 5:01 IST
ಚಿಕ್ಕಬಳ್ಳಾಪುರ ತಾಲ್ಲೂಕಿನ ಅರಸನಹಳ್ಳಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಪದಾಧಿಕಾರಿಗಳು
ಚಿಕ್ಕಬಳ್ಳಾಪುರ ತಾಲ್ಲೂಕಿನ ಅರಸನಹಳ್ಳಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಪದಾಧಿಕಾರಿಗಳು   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಅರಸನಹಳ್ಳಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಸಮಿತಿ ರಾಜ್ಯ ಸಂಚಾಲಕ ಸು.ಧಾ.ವೆಂಕಟೇಶ್ ಮಾತನಾಡಿ, ಎಲ್ಲ ವರ್ಗದ ಜನರಿಗೂ ಅನುಕೂಲವಾಗುವ ರೀತಿಯಲ್ಲಿ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿದರು. ಸಂವಿಧಾನವು ವ್ಯಕ್ತಿ, ವಾಕ್ ಸ್ವಾತಂತ್ರ್ಯ ಸೇರಿದಂತೆ ಎಲ್ಲ ಬಗೆಯ ಸ್ವಾತಂತ್ರ್ಯವನ್ನು ಎಲ್ಲ ವರ್ಗದ ಜನರಿಗೂ ನೀಡಿದೆ ಎಂದು ಹೇಳಿದರು.

ಅಂಬೇಡ್ಕರ್ ಅವರ ಸಂವಿಧಾನ ಯಾವುದೇ ಒಂದು ವರ್ಗದ ಪರವಾಗಿ ಇಲ್ಲ. ಸಮಗ್ರ ದೇಶದ ಅಭಿವೃದ್ಧಿ ಮತ್ತು ತುಳಿತಕ್ಕೆ ಒಳಗಾದ ಸಮುದಾಯಗಳು ಏಳಿಗೆಯ ದೃಷ್ಟಿಯನ್ನು ಸಂವಿಧಾನ ಹೊಂದಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಬೇಕಾದರೆ ಸಂವಿಧಾನದ ಆಶಯಗಳು ಪಾಲನೆ ಆಗಬೇಕು ಎಂದರು.

ADVERTISEMENT

ಸಮಿತಿ ಮುಖಂಡರಾದ ನಾಗೇಶ್, ಸೂಲಿಕುಂಟೆ ವೆಂಕಟೇಶ, ಸತೀಶ್,ಮುನಿರಾಜು , ಡೇವಿಡ್, ಮುನಿಕೃಷ್ಣ, ವೆಂಕಟರಾಮು, ಟೈಲರ್ ಸತಿ, ಪವನ್, ಗಜೇಂದ್ರ, ಅರಸನಹಳ್ಳಿ ಮಂಜುನಾಥ್, ಸಾಗರಹಲ್ಲಿ ಮುನಿಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.