ADVERTISEMENT

12 ಮಂದಿಗೆ ಕೊರೊನಾ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 3:54 IST
Last Updated 19 ಜುಲೈ 2021, 3:54 IST
.
.   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭಾನುವಾರ 12 ಮಂದಿಗೆ ಕೊರೊನಾ ಸೋಂಕು ತಗುಲಿದೆ. 21 ರೋಗಿಗಳು ಗುಣವಾಗಿದ್ದಾರೆ. ಚಿಂತಾಮಣಿ ತಾಲ್ಲೂಕಿನ 10, ಗೌರಿಬಿದನೂರು ಮತ್ತು ಶಿಡ್ಲಘಟ್ಟ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ದೃಢವಾಗಿದೆ. ಇವರಲ್ಲಿ 7 ಮಹಿಳೆಯರು ಹಾಗೂ 5 ಪುರುಷರು ಇದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಆರು, ಚಿಂತಾಮಣಿ, ಗೌರಿಬಿದನೂರು ತಾಲ್ಲೂಕಿನ ತಲಾ ಇಬ್ಬರು ಹಾಗೂ ಶಿಡ್ಲಘಟ್ಟ ತಾಲ್ಲೂಕಿನ 11 ರೋಗಿಗಳು ಗುಣವಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪ್ರಮಾಣ ಶೇ 0.39ಕ್ಕೆ ಇಳಿದಿದೆ. ಗುಣವಾಗುವವರ ಪ್ರಮಾಣ ಶೇ 98.75ರಷ್ಟಿದೆ.

ಭಾನುವಾರ 3,061 ಜನರ ಗಂಟಲು ಸ್ರಾವ ಮಾದರಿಯನ್ನು ಪರೀಕ್ಷೆಗೆ ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸಕ್ರಿಯ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.