ADVERTISEMENT

ಕೊರೊನಾ ಪಾಸಿಟಿವ್: ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 6:06 IST
Last Updated 26 ಏಪ್ರಿಲ್ 2021, 6:06 IST

ಗೌರಿಬಿದನೂರು: ಕಳ್ಳತನ ಪ್ರಕರಣದಲ್ಲಿ ಎರಡು ಬಾರಿ ಜೈಲು ವಾಸ ಅನುಭವಿಸಿದ್ದ ವ್ಯಕ್ತಿಯೋರ್ವ ಕೊರೊನಾ ಪಾಸಿಟಿವ್ ವರದಿ ಬಂದ ಬಳಿಕ ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಹಿರೇಬಿದನೂರು ಬಳಿಯ ಉತ್ತರ ಪಿನಿಕಿನಿ ನದಿ ಭಾಗದಲ್ಲಿ ನಡದಿದೆ‌.

ತಾಲ್ಲೂಕಿನ ವೇದಲವೇಣಿ ಗ್ರಾಮದ ಶಿವಾನಂದ (24) ಮೃತರು. ಮೃತ ವ್ಯಕ್ತಿ ದ್ವಿಚಕ್ರ ವಾಹನ ಕಳ್ಳತನದ ಆರೋಪದಲ್ಲಿ 2 ಬಾರಿ ಜೈಲಿಗೆ ಹೋಗಿ ಬಂದಿದ್ದಾನೆ. ಇದೇ ತಿಂಗಳು 20 ರಂದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್ ವರದಿ ಬಂದ ಮೇಲೆ ಸೋಂಕಿತ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಕೊರೊನಾ ಪಾಸಿಟಿವ್ ವರದಿ ಬಂದಿರುವ ಕುರಿತು ಆರೋಗ್ಯ ಇಲಾಖೆ ಸಿಬ್ಬಂದಿ ಆತನಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸೂಚಿಸಿದ್ದಾರೆ. ಆದರೆ, ಶಿವಾನಂದ್ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ. ಬಳಿಕ ಶಿವಾನಂದ್ ಮನೆ ಬಳಿ ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದರೂ ಆತ ಸಿಕ್ಕಿರಲಿಲ್ಲ. ಆದರೆ, ಇದೀಗ ಶಿವಾನಂದ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ADVERTISEMENT

ಸ್ಥಳಕ್ಕೆ ನಗರ ಠಾಣೆಯ ಪಿಎಸ್ಐ ಪ್ರಸನ್ನ ಕುಮಾರ್ ಭೇಟಿ ನೀಡಿದ್ದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.