ADVERTISEMENT

ಗೌರಿಬಿದನೂರು | ಸಮುದಾಯದಲ್ಲಿ ಸೋಂಕು ಹರಡಿದ ಭೀತಿ, ಗ್ರಾಮೀಣ ಪ್ರದೇಶದಲ್ಲಿ ಆತಂಕ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 7:04 IST
Last Updated 29 ಜೂನ್ 2020, 7:04 IST
ಗೌರಿಬಿದನೂರು ತಾಲ್ಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಸೋಂಕಿತರ ಮನೆಗಳ ಪ್ರದೇಶಗಳನ್ನು ಸೀಲ್ ಡೌನ್ ಮಾಡಿ, ವೈರಸ್ ನಾಶಕ ದ್ರಾವಣ ಸಿಂಪಡಿಸಲಾಯಿತು.
ಗೌರಿಬಿದನೂರು ತಾಲ್ಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಸೋಂಕಿತರ ಮನೆಗಳ ಪ್ರದೇಶಗಳನ್ನು ಸೀಲ್ ಡೌನ್ ಮಾಡಿ, ವೈರಸ್ ನಾಶಕ ದ್ರಾವಣ ಸಿಂಪಡಿಸಲಾಯಿತು.   

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ಆರು ಹಳ್ಳಿಗಳಲ್ಲಿ ಸೋಮವಾರ 10 ಮಂದಿಗೆ ಕೋವಿಡ್ 19 ತಗುಲಿರುವುದು ದೃಢಪಟ್ಟಿದೆ. ಇದರಿಂದ ಸಮುದಾಯದಲ್ಲಿ ಸೋಂಕು ಹರಡಿರುವ ಶಂಕೆ ಉಂಟಾಗಿದ್ದು, ಗ್ರಾಮೀಣ ಪ್ರದೇಶದ ಜನರು ತಲ್ಲಣಗೊಂಡಿದ್ದಾರೆ.

ಮಹಾರಾಷ್ಟ್ರದಿಂದ ವಾಪಾಸಾದ ಡಿಪಾಳ್ಯದ 28‌ ವರ್ಷದ ವ್ಯಕ್ತಿ, 21 ವರ್ಷದ ಗೃಹಿಣಿಯಲ್ಲಿ ಕೋವಿಡ್ ಪತ್ತೆಯಾಗಿದೆ.
ಕಡಬೂರಿನ 65 ವರ್ಷದ ಪುರುಷ, 60 ವರ್ಷದ ಮಹಿಳೆ, ಹಾಲಗಾನಹಳ್ಳಿಯ 65 ವರ್ಷದ ಪುರುಷ, ಅಲ್ಲಿಪುರದ 20 ವರ್ಷದ ಯುವಕನೊಬ್ಬನಲ್ಲಿ ಕೋವಿಡ್ ಕಾಣಿಸಿಕೊಂಡಿದೆ.

ಸೊನಗಾನಹಳ್ಳಿಯ ಒಬ್ಬರು, ಚಿಕ್ಕಹೊಸಹಳ್ಳಿಯ ಮೂರು ಜನರಲ್ಲಿ‌ ಸೋಂಕು ಕಾಣಿಸಿಕೊಂಡಿರುವುದು ಸ್ಥಳೀಯ ಜನರಲ್ಲಿ ಭೀತಿ‌ ಹುಟ್ಟಿಸಿದೆ.

ಕೋವಿಡ್ ಪೀಡಿತರ ವಾಸಸ್ಥಳ‌ಪ್ರದೇಶಗಳನ್ನು ಸೀಲ್ ಡೌನ್ ಮಾಡಿರುವ ಆರೋಗ್ಯ ಇಲಾಖೆ ಸಿಬ್ಬಂದಿ, ವೈರಸ್‌ ನಾಶಕ ದ್ರಾವಣದಿಂದ ಶುಚಿಗೊಳಿಸುವುದು, ಸೋಂಕಿತರ ಸಂಪರ್ಕಕ್ಕೆ ಬಂದವರ ಮಾಹಿತಿ‌ ಕಲೆ ಹಾಕುವ ಕೆಲಸದಲ್ಲಿ ತೊಡಗಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 196ಕ್ಕೆ ಏರಿದೆ. ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 24, ಬಾಗೇಪಲ್ಲಿ 53, ಚಿಂತಾಮಣಿ 14, ಗೌರಿಬಿದನೂರು 95, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 10 ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಸೋಂಕಿತರ ಪೈಕಿ ಮೂರು ಜನರು ಮೃತಪಟ್ಟಿದ್ದು, ಚಿಕಿತ್ಸೆಯಿಂದ 158 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ವಾರ್ಡ್‌ನಲ್ಲಿ 35 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.