ADVERTISEMENT

ಗೌರಿಬಿದನೂರು: ಶಾಸಕ ಶಿವಶಂಕರರೆಡ್ಡಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 6:30 IST
Last Updated 13 ಜನವರಿ 2022, 6:30 IST
ಶಾಸಕ ಎನ್.ಎಚ್.ಶಿವಶಂಕರರೆಡ್ಡಿ
ಶಾಸಕ ಎನ್.ಎಚ್.ಶಿವಶಂಕರರೆಡ್ಡಿ   

ಗೌರಿಬಿದನೂರು: ಮೇಕೆದಾಟು ಪಾದಯಾತ್ರೆಯಲ್ಲಿ ಮೊದಲ‌ ದಿನ ಭಾಗಿಯಾಗಿದ್ದ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಅವರಿಗೆ ಮಂಗಳವಾರ ಕೋವಿಡ್ದೃಢಪಟ್ಟಿದೆ.

ಈ ವಿಷಯವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಭಾನುವಾರ ಬೆಂಬಲಿಗರೊಂದಿಗೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಅವರು ಸೋಮವಾರ ಕೋವಿಡ್ ತಪಾಸಣೆಗೆ ಒಳಗಾಗಿದ್ದರು. ಮಂಗಳವಾರ ವರದಿ ಬಂದಿದ್ದು ಸೋಂಕು ದೃಢಪಟ್ಟಿದೆ. ಶಾಸಕರು ತಮ್ಮ ಸ್ವಗ್ರಾಮ ಎಚ್.ನಾಗಸಂದ್ರದಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ.

ಶಾಸಕರೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ ಅವರಿಗೂ ಸೋಂಕು ತಗುಲಿದೆ.ತಾಲ್ಲೂಕಿನ 31 ಗ್ರಾ.ಪಂ ಗಳಿಂದ ಕಾಂಗ್ರೆಸ್ ‌ಕಾರ್ಯಕರ್ತರುಬುಧವಾರ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಕಳೆದ 3-4 ದಿನಗಳಿಂದ ಶಾಸಕರ ಪ್ರಾಥಮಿಕ ‌ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.