ಚಿಕ್ಕಬಳ್ಳಾಪುರ: ತಾಲ್ಲೂಕಿನ ಜಕ್ಕಲಮಡುಗು ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಶುಕ್ರವಾರ ಸಂಜೆ ಬೆಂಗಳೂರಿನ ಸುಂಕದಕಟ್ಟೆಯ ನಿವಾಸಿ ರೋಹಿತ್ (22) ಮೃತಪಟ್ಟಿದ್ದಾರೆ. ರೋಹಿತ್ ಎಂಜಿನಿಯರ್ ಆಗಿದ್ದರು.
ನಾಲ್ಕು ಮಂದಿ ಸ್ನೇಹಿತರ ಜತೆ ಅವರು ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದರು. ಈ ಗುಂಪಿನಲ್ಲಿದ್ದ ಸ್ನೇಹಿತನ ಜನ್ಮದಿನ ಆಚರಿಸಿದ್ದರು. ನಂತರ ಹಿನ್ನೀರಿನಲ್ಲಿ ಈಜಲು ಮುಂದಾಗಿದ್ದು ಈ ವೇಳೆ ಅವಘಡ ನಡೆದಿದೆ. ಕತ್ತಲಾದ ಕಾರಣ ಶವವನ್ನು ಹೊರತೆಗೆಯಲು ಸಾಧ್ಯವಾಗಿರಲಿಲ್ಲ. ಶನಿವಾರ ಬೆಳಿಗ್ಗೆ ಅಗ್ನಿಶಾಮಕ ದಳದ ಅಧಿಕಾರಿಗಳು ಶವವನ್ನು ಹೊರ ತೆಗೆದರು. ನಂದಿಗಿರಿಧಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.