ADVERTISEMENT

ಹಲವು ಕಡೆ ಕಳ್ಳತನ ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 31 ಜುಲೈ 2022, 5:48 IST
Last Updated 31 ಜುಲೈ 2022, 5:48 IST

ಚಿಕ್ಕಬಳ್ಳಾಪುರ: ನಗರದಲ್ಲಿ ನಡೆದ ವೆಂಕಟಲಕ್ಷ್ಮಮ್ಮ ಎಂಬುವವರ ಸರಗಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ನೆಲಮಂಗಲದ ಇಮ್ರಾನ್ ಪಾಷಾ, ಸಿಕಂದರ್, ಬೆಂಗಳೂರಿನ ಗೌರಿಪಾಳ್ಯದ ಶಬರೀಶ್ ಬಂಧಿತರು.

ಚಿಕ್ಕಬಳ್ಳಾಪುರ ತಾಲ್ಲೂಕಿನ ಕಾಡಿಗಾನಹಳ್ಳಿಯ ವೆಂಕಟಲಕ್ಷ್ಮಮ್ಮ, ಚಿಕ್ಕಬಳ್ಳಾಪುರದ ಎಇಒ ರಸ್ತೆಯಲ್ಲಿರುವ ತಮ್ಮ ಸಂಬಂಧಿ ಶ್ರೀನಿವಾಸ್ ಅವರ ಅಂಗಡಿಯ ಮುಂದೆ ಕುಳಿತ್ತಿದ್ದರು. ಈ ವೇಳೆ ಪಲ್ಸರ್‌ನಲ್ಲಿ ಬಂದ ದುಷ್ಕರ್ಮಿಗಳು ಅವರ 40 ಗ್ರಾಂ ಚಿನ್ನದ ಸರವನ್ನು ಕಳ್ಳತನ ಮಾಡಿದ್ದರು. ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿತ್ತು.

ಚಿಕ್ಕಬಳ್ಳಾಪುರ, ಚಿಂತಾಮಣಿ, ಶಿಡ್ಲಘಟ್ಟ, ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಮತ್ತು ಬೆಂಗಳೂರಿನ ಶಂಕರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಕಳ್ಳತನ ಪ್ರಕರಣಗಳಲ್ಲಿಯೂ ಆರೋಪಿಗಳುಭಾಗಿ ಆಗಿರುವುದು ವಿಚಾರಣೆಗೆ ಒಳಪಡಿಸಿದಾಗ ಪೊಲೀಸರಿಗೆ ತಿಳಿದು ಬಂದಿದೆ.

ADVERTISEMENT

ಇಮ್ರಾನ್ ಪಾಷ ಮೇಲೆ ವಿವಿಧ ಠಾಣೆಗಳಲ್ಲಿ 31, ಶಬರೀಷ್ ಮೇಲೆ 28 ಮತ್ತು ಸಿಕಂದರ್ ಮೇಲೆ ಎರಡು ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ.

ಚಿಕ್ಕಬಳ್ಳಾಪುರ ಸಿಪಿಐ ಬಿ.ರಾಜು, ಗ್ರಾಮಾಂತರ ಠಾಣೆ ಪಿಎಸ್‌ಐ ಪ್ರದೀಪ್ ಪೂಜಾರಿ ನೇತೃತ್ವದಲ್ಲಿಡಿವೈಎಸ್‌ಪಿ ವಿ.ಕೆ.ವಾಸುದೇವ್ ಮಾರ್ಗದಲ್ಲಿ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆದಿತ್ತು. ಆರೋಪಿಗಳ ಪತ್ತೆಗೆ ಶ್ರಮಿಸಿದ ಪೊಲೀಸರನ್ನು ಎಸ್ಪಿ ಡಿ.ಎಲ್.ನಾಗೇಶ್ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.