ಸೈಬರ್ ವಂಚನೆ
ಚಿಕ್ಕಬಳ್ಳಾಪುರ: ಎನ್ಕೌಂಟರ್ ಕಾರಣಕ್ಕೆ ಪ್ರಸಿದ್ಧರಾದ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರ ಹೆಸರು ಹೇಳಿ ತಾಲ್ಲೂಕಿನ ಸಬ್ಬೇನಹಳ್ಳಿಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿವೃತ್ತ ಹಿರಿಯ ಭೂ ವಿಜ್ಞಾನಿ ಬಿ.ಕೆ. ರಾಮಚಂದ್ರಪ್ಪ ಹಾಗೂ ಇವರ ಪತ್ನಿ ಸುಜಾತ ಅವರಿಗೆ ಸೈಬರ್ ವಂಚಕರು ₹ 12.65 ಲಕ್ಷ ವಂಚಿಸಿದ್ದಾರೆ.
ಈ ಸಂಬಂಧ ಅವರು ಚಿಕ್ಕಬಳ್ಳಾಪುರ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.
ದಂಪತಿಗೆ ಕರೆ ಮಾಡಿರುವ ಸೈಬರ್ ವಂಚಕರು, ‘ಮುಂಬೈನ ಕೆನರಾ ಬ್ಯಾಂಕಿನಲ್ಲಿ ನಿಮ್ಮ ಹೆಸರಿನ ಖಾತೆ ಇದೆ. ಕೆಲವರು ನಿಮ್ಮ ಖಾತೆಯನ್ನು ಹಣ ಅಕ್ರಮ ವರ್ಗಾವಣೆಗೆ ಬಳಸಿಕೊಂಡಿದ್ದಾರೆ. ಈ ಕಾರಣದಿಂದ ನಿಮ್ಮ ವಿರುದ್ಧ ಬಂಧನದ ಆದೇಶ ಜಾರಿಯಾಗಿದೆ. ಈ ಕೂಡಲೇ ನಿಮ್ಮ ಕೆನರಾ ಬ್ಯಾಂಕ್ ಖಾತೆಗೆ ₹ 12.65 ಲಕ್ಷ ವರ್ಗಾವಣೆ ಮಾಡಿ. ಇಲ್ಲದಿದ್ದರೆ ನಿಮ್ಮನ್ನು ಬಂಧಿಸಬೇಕಾಗುತ್ತದೆ’ ಎಂದು ಭಯಗೊಳಿಸಿದ್ದಾರೆ.
ಸೈಬರ್ ವಂಚಕರ ಈ ಮಾತಿಗೆ ಹೆದರಿದ ದಂಪತಿ ಕೆನರಾ ಬ್ಯಾಂಕ್ ಖಾತೆಗೆ ಹಣವನ್ನು ಆರ್ಟಿಜಿಎಸ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.