ಚೇಳೂರು: ಕಡೆ ಕಾರ್ತಿಕ ಸೋಮವಾರದ ಪ್ರಯಕ್ತ ಚೇಳೂರಿನ ಕಾಶಿ ವಿಶ್ವೇಶ್ವರ ದೇವಾಲಯದಲ್ಲಿ ದೀಪೋತ್ಸವ ನಡೆಯಿತು.
ಮಹಿಳೆಯರು ದೀಪಗಳನ್ನು ಬೆಳಗಿಸಿದರು. ಬೆಳಿಗ್ಗೆ ಅರ್ಚನೆ ಪಂಚಾಮೃತ ಅಭಿಷೇಕ, ಲಘುನ್ಯಾಸ ಪೂರ್ವಕ ಹೂವಿನ ಅಲಂಕಾರ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿತ್ತು.
ಭಕ್ತ ವೃಂದದಿಂದ ಕಡೆಯ ಕಾರ್ತಿಕ ಸೋಮವಾರ ಪ್ರಯುಕ್ತ ದೇವಾಲಯಕ್ಕೆ ಬಂದ ಭಕ್ತರು ಪೂಜೆ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.