ಗೌರಿಬಿದನೂರು: ತಾಲ್ಲೂಕಿನ ತೊಂಡೇಬಾವಿ ಹೋಬಳಿಯ ತಬಸಮಾಕಲಹಳ್ಳಿ, ಗ್ರಾಮದಲ್ಲಿ ಚಿರತೆ ದಾಳಿ ನಡೆದಿದೆ.
ಸೋಮವಾರ ತಡರಾತ್ರಿ ಗ್ರಾಮಕ್ಕೆ ನುಗ್ಗಿದ ಚಿರತೆ, ಗ್ರಾಮದಲ್ಲಿನ ಬೀದಿ ನಾಯಿಯನ್ನು ಕೊಂದು ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ತಿಂದು ಹಾಕಿದೆ.
ಈ ದಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ವಿಷಯವನ್ನು ಗ್ರಾಮಸ್ಥರು ಅರಣ್ಯಾಧಿಕಾರಿಗೆ ತಿಳಿಸಿದ್ದು, ಉಪ ವಲಯ ಅರಣ್ಯಾಧಿಕಾರಿ ಶಿವಕುಮಾರ್ ಮತ್ತು ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಚಿರತೆ ಹಿಡಿಯಲು ಬೋನು ಇಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.