ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಬುಧವಾರ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಜ್ಯ ಶಾಖೆಯ ವತಿಯಿಂದ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ನಗರದ ಹಿರಿಯ ವೈದ್ಯ, ಮಂಜುನಾಥ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ವಿ.ಮಂಜುನಾಥ್ ಅವರಿಗೆ ಐಎಂಎ ವೈದ್ಯರ ದಿನಾಚರಣೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಐಎಂಎ ಕರ್ನಾಟಕ ಶಾಖೆ ಅಧ್ಯಕ್ಷ ಡಾ.ಮಧುಸೂದನ ಕಾರಿಗನೂರು, ಕಾರ್ಯದರ್ಶಿ ಡಾ.ಎಸ್.ಶ್ರೀನಿವಾಸ್, ಐಎಂಎ ಚಿಕ್ಕಬಳ್ಳಾಪುರ ಶಾಖೆಯ ಅಧ್ಯಕ್ಷ ಡಾ.ಪ್ರಶಾಂತ್ ಎಸ್.ಮೂರ್ತಿ, ಪದಾಧಿಕಾರಿಗಳಾದ ಡಾ.ಎಂ.ವೆಂಕಟಾಚಲಪತಿ, ಡಾ.ಎಚ್.ಎಸ್.ಮಧುವನ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.