ADVERTISEMENT

ಕಾಂಗ್ರೆಸ್– ಜೆಡಿಎಸ್ ಕಾರ್ಯಕರ್ತರ ಘರ್ಷಣೆ: 8 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 4:28 IST
Last Updated 8 ಆಗಸ್ಟ್ 2022, 4:28 IST

ಚಿಂತಾಮಣಿ: ತಾಲ್ಲೂಕಿನ ಮೂಗಲಮರಿ ಗ್ರಾಮದಲ್ಲಿ ಶನಿವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದಲ್ಲಿ ಕಾಂಗ್ರೆಸ್ ಬೃಹತ್ ಬೈಕ್ ರ‍್ಯಾಲಿ ಆಯೋಜಿಸಿತ್ತು. ಕಾರ್ಯಕರ್ತರು ಬೈಕ್ ರ‍್ಯಾಲಿಗೆ ತೆರಳಲು ಗ್ರಾಮದ ರಸ್ತೆಯಲ್ಲಿ ಬೈಕ್‌ ನಿಲ್ಲಿಸಿದ್ದರು ಎನ್ನಲಾಗಿದೆ. ಜೆಡಿಎಸ್ ಕಾರ್ಯಕರ್ತ ಶಿವರಾಜ್ ಎಂಬುವರು ರಸ್ತೆಯಲ್ಲಿನ ಬೈಕ್‌ ತೆಗೆಯುವಂತೆ ಒತ್ತಾಯಿಸಿದ್ದಾರೆ. ಈ ವಿಷಯವಾಗಿ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಇದು ವಿಕೋಪಕ್ಕೆ ತಿರುಗಿ ಸಂಘರ್ಷ ಏರ್ಪಟ್ಟಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಕಾಂಗ್ರೆಸ್‌ನ ಐವರು ಮತ್ತು ಜೆಡಿಎಸ್‌ನ ಮೂವರು ಗಾಯಗೊಂಡಿದ್ದಾರೆ.

ADVERTISEMENT

ಶಾಸಕ ಎಂ.ಕೃಷ್ಣಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಜೆಡಿಎಸ್ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.
ಘರ್ಷಣೆ ಬಗ್ಗೆ ಎರಡು ಕಡೆಯವರು ದೂರು, ಪ್ರತಿದೂರು ನೀಡಿದ್ದು, ಕೆಂಚಾರ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.