ADVERTISEMENT

ಅರ್ಹತಾ ಪ್ರವೇಶ ಪರೀಕ್ಷೆ ಸುಗಮ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2020, 14:23 IST
Last Updated 4 ಅಕ್ಟೋಬರ್ 2020, 14:23 IST
ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಮ್ಮ ಕೊಠಡಿ ವಿವರ ಪರಿಶೀಲಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಮ್ಮ ಕೊಠಡಿ ವಿವರ ಪರಿಶೀಲಿಸಿದರು.   

ಚಿಕ್ಕಬಳ್ಳಾಪುರ: ನಗರದ 13 ಕೇಂದ್ರಗಳಲ್ಲಿ ಭಾನುವಾರ ರಾಜ್ಯ ಶಿಕ್ಷಕರ ಅರ್ಹತಾ ಪ್ರವೇಶ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ಬೆಳಿಗ್ಗೆ ಡಿ.ಇಡಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ-1ಕ್ಕೆ ನಡೆದ ಪರೀಕ್ಷೆಗೆ 1,460 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಆ ಪೈಕಿ 1,110 ಜನರು ಪರೀಕ್ಷೆಗೆ ಹಾಜರಾದರೆ, 350 ಮಂದಿ ಪರೀಕ್ಷೆಗೆ ಗೈರಾದರು

ಮಧ್ಯಾಹ್ನ ನಡೆದ ಎರಡನೇ ಪ್ರಶ್ನೆ ಪತ್ರಿಕೆಗೆ 3,002 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 2,543 ಜನ ಪರೀಕ್ಷೆ ಬರೆದರು. 459 ಮಂದಿ ಪರೀಕ್ಷೆಗೆ ಗೈರಾದರು. ಸಾರ್ವಜನಿಕ ಶಿಕ್ಷಣ ಇಲಾಖೆ ಕೋವಿಡ್‌ ಮಾರ್ಗಸೂಚಿ ಅನುಸಾರ ಪರೀಕ್ಷೆ ನಡೆಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.