
ಪ್ರಜಾವಾಣಿ ವಾರ್ತೆ
ಚಿಂತಾಮಣಿ: ತಾಲ್ಲೂಕಿನ ಕೈವಾರ ಅಂಬೇಡ್ಕರ್ ನಗರದ ಗ್ರಾಮದೇವತೆ ಗಂಗಮ್ಮ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಲಕ್ಷದೀಪೋತ್ಸವ ಹಮ್ಮಿಕೊಳ್ಳಲಾಗಿತ್ತು.
ದೇವಸ್ಥಾನವನ್ನು ಸ್ವಚ್ಛಗೊಳಿಸಿ ಸುಣ್ಣಬಣ್ಣ ಬಳಿಯಲಾಗಿತ್ತು. ದೇವಸ್ಥಾನದ ಆವರಣದಲ್ಲಿ ರಂಗೋಲಿ ಬಿಡಿಸಿ ತಳಿರು ತೋರಣ ಕಟ್ಟಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಹೋಮ, ರುದ್ರಾಭಿಷೇಕ, ಮಂಗಳಾರತಿ ಮಾಡಲಾಯಿತು. ನಿಂಬೆ ಹಣ್ಣಿನ ಹಾರ ಹಾಗೂ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು.
ಭಕ್ತರು ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಬಂದು ಹಣ್ಣುಕಾಯಿ ಅರ್ಪಿಸಿದರು. ಮಹಿಳೆಯರು ನಿಂಬೆ ಹಣ್ಣು, ದೀಪಹಚ್ಚಿ ಪ್ರಾರ್ಥನೆ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.