ADVERTISEMENT

ಚಿಕ್ಕಬಳ್ಳಾಪುರಕ್ಕೆ ಜಿ.ಕೆ. ಮಿಥುನ್ ಕುಮಾರ್ ನೂತನ ಎಸ್‌ಪಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 10:32 IST
Last Updated 18 ಮಾರ್ಚ್ 2020, 10:32 IST
ಜಿ.ಕೆ. ಮಿಥುನ್ ಕುಮಾರ್
ಜಿ.ಕೆ. ಮಿಥುನ್ ಕುಮಾರ್    

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಬುಧವಾರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಿ.ಕೆ. ಮಿಥುನ್ ಕುಮಾರ್ ಅವರನ್ನು ನೇಮಕ ಮಾಡಿದೆ.

ಮಿಥುನ್ ಕುಮಾರ್ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಕಾರ್ಕಳ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕರಾಗಿದ್ದರು.

ಈ ಹಿಂದೆ ಚಿಕ್ಕಬಳ್ಳಾಪುರ ಎಸ್ಪಿ ಆಗಿದ್ದ ಅಭಿನವ್ ಖರೆ ಅವರು ಕೇಂದ್ರ ಸೇವೆಗೆ ನಿಯುಕ್ತರಾಗುವ ಜತೆಗೆ ಸಿಬಿಐ ಎಸ್ಪಿ ಆಗಿಯೂ ನಿಯೋಜನೆಗೊಂಡಿದ್ದರು.

ADVERTISEMENT

ಇತ್ತೀಚೆಗಷ್ಟೇ ಅಭಿನವ್ ಖರೆ ಅವರನ್ನು ರಾಜ್ಯ ಸೇವೆಯಿಂದ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

2016ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾದ ಮಿಥುನ್ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗೊಂಡನಹಳ್ಳಿಯವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.