ADVERTISEMENT

‘ದೇವರ ಹೆಸರಿನ ಆಸ್ತಿ ಖಾಸಗಿಯವರಿಗಿಲ್ಲ’

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 2:20 IST
Last Updated 26 ನವೆಂಬರ್ 2021, 2:20 IST

ಚಿಕ್ಕಬಳ್ಳಾಪುರ: ನಗರದ ಪ್ರಸಿದ್ಧ ವೇಣುಗೋಪಾಲ ಕೃಷ್ಣಸ್ವಾಮಿ ದೇವಾಲಯದ ಆಸ್ತಿಯನ್ನು ಖಾಸಗಿಯವರಿಗೆ ಖಾತೆ ಮಾಡಿಕೊಡಲಾಗಿದೆ ಎನ್ನುವ ವಿಚಾರ ಸತ್ಯಕ್ಕೆ ದೂರವಾದುದು ಎಂದು ಆಜಾದ್ ಭಜನಾ ಮಂಡಳಿ ಮತ್ತು ವೇಣುಗೋಪಾಲ ಕೃಷ್ಣಸ್ವಾಮಿ ದೇವಾಲಯ ತಿಳಿಸಿದೆ.

8ನೇ ವಾರ್ಡ್‌ನಲ್ಲಿ ದೇವಾಲಯವಿದೆ. ದೇವಾಲಯದ ಜಾಗವನ್ನು ನಗರಸಭೆ ಅಧ್ಯಕ್ಷ ಡಿ.ಎಸ್. ಆನಂದರೆಡ್ಡಿ ಬಾಬು ಖಾಸಗಿಯವರಿಗೆ ಖಾತೆ ಬದಲಾವಣೆ ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಸತ್ಯಕ್ಕೆ ದೂರವಾದುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ದೂರು ದಾಖಲು: ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ವೈರಲ್ ಆಗಿದ್ದು ಸುದ್ದಿ ಹರಡುತ್ತಿರುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ನನ್ನ ರಾಜಕೀಯ ಬೆಳವಣಿಗೆ ಸಹಿಸದೆ ಮತ್ತು ತೇಜೋವಧೆಗಾಗಿ ಈ ರೀತಿಯ ಪೋಸ್ಟ್‌ಗಳನ್ನು ಪ್ರಕಟಿಸಲಾಗಿದೆ.

ಆರೋಪಿಗಳ ಪತ್ತೆಗೆ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.