ಚಿಂತಾಮಣಿ: ರಾಜ್ಯದ ಪವಿತ್ರ ಯಾತ್ರಾಸ್ಥಳವಾದ ಕೈವಾರದ ಶ್ರೀಯೋಗಿನಾರೇಯಣ ಮಠದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನ ಗುರುವಾರ ಶಾಸಕ ಎಂ. ಕೃಷ್ಣಾರೆಡ್ಡಿ ವಿಶೇಷ ಪೂಜೆ ಸಲ್ಲಿಸಿ, ಗೋದಾನ ಮತ್ತು ಪಾದುಕೆಗಳ ಬೆಳ್ಳಿಪೀಠವನ್ನು ಸಮರ್ಪಿಸಿದರು.
ಶಾಸಕರ ಕುಟುಂಬದಿಂದ ಶ್ರೀಯೋಗಿನಾರೇಯಣ ಯತೀಂದ್ರರಿಗೆ ವಿಶೇಷ ಅಲಂಕಾರ, ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರದ್ಧಾ ಭಕ್ತಿಯಿಂದ ಹಮ್ಮಿಕೊಂಡಿದ್ದರು. ಅರ್ಚಕ ವೃಂದ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು.
ತಾಲ್ಲೂಕಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ. ಕ್ಷೇತ್ರದ ಜನತೆ ಶಾಂತಿ, ನೆಮ್ಮದಿಯಿಂದ ಬಾಳಲಿ. ಜನರನ್ನು ಕಾಡುತ್ತಿರುವ ಕೋವಿಡ್ ಆದಷ್ಟು ಬೇಗ ದೂರವಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು ಎಂದು ಶಾಸಕರು ಹೇಳಿದರು.
ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.