ADVERTISEMENT

ಗೌರಿಬಿದನೂರು: ಮಳೆಗೆ ಕೊಚ್ಚಿ ಹೋದ ತಾತ್ಕಾಲಿಕ ಸೇತುವೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2024, 13:34 IST
Last Updated 18 ಆಗಸ್ಟ್ 2024, 13:34 IST
ಗೌರಿಬಿದನೂರು ಚಿಕ್ಕಬಳ್ಳಾಪುರ ಮಾರ್ಗದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಸೇತುವೆ ಶನಿವಾರ ಮಳೆಗೆ ಕೊಚ್ಚಿ ಹೋಗಿದೆ
ಗೌರಿಬಿದನೂರು ಚಿಕ್ಕಬಳ್ಳಾಪುರ ಮಾರ್ಗದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಸೇತುವೆ ಶನಿವಾರ ಮಳೆಗೆ ಕೊಚ್ಚಿ ಹೋಗಿದೆ   

ಗೌರಿಬಿದನೂರು: ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಗೌರಿಬಿದನೂರು–ಚಿಕ್ಕಬಳ್ಳಾಪುರ ಮಾರ್ಗದ ಗಿಡಗಾನಹಳ್ಳಿ ಬಳಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಸಂಪೂರ್ಣವಾಗಿ ಕೊಚ್ಚಿಹೋಗಿದೆ.

ಸೇತುವೆ ಕುಸಿತದಿಂದಾಗಿ ಗೌರಿಬಿದನೂರು ಮತ್ತು ಚಿಕ್ಕಬಳ್ಳಾಪುರ ತೆರಳುವ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದೆ. ದ್ವಿಚಕ್ರ ವಾಹನ ಸವಾರರು ಭಕ್ತರಹಳ್ಳಿ-ಗಿಡಗಾನಹಳ್ಳಿ ಮಾರ್ಗ ಬಳಸಿಕೊಂಡು ಸಂಚರಿಸುತ್ತಿದ್ದಾರೆ. ಬೃಹತ್ ವಾಹನಗಳು ತೊಂಡೇಬಾವಿ-ಮಂಚೇನಹಳ್ಳಿ ಮಾರ್ಗದ ಮೂಲಕ ಚಿಕ್ಕಬಳ್ಳಾಪುರ ಮತ್ತು ಗೌರಿಬಿದನೂರು ಕಡೆಗೆ ಸಂಚರಿಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT