ADVERTISEMENT

ಗ್ರಾ.ಪಂ. ಮಾಜಿ ಸದಸ್ಯ ಆತ್ಮಹತ್ಯೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2022, 5:08 IST
Last Updated 15 ಏಪ್ರಿಲ್ 2022, 5:08 IST

ಗೌರಿಬಿದನೂರು: ನಗರ ಸಮೀಪದ ಹಿರೇಬಿದನೂರು ಗ್ರಾ‌.ಪಂ. ಮಾಜಿ ಸದಸ್ಯ ಜಿ. ರಾಜಣ್ಣ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ‌ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿಆಸ್ಪತ್ರೆಗೆ ರವಾನಿಸಲಾಗಿದೆ.

ಕಾಂಗ್ರೆಸ್ ಮುಖಂಡರಾಗಿದ್ದ ರಾಜಣ್ಣ ಇತ್ತೀಚೆಗೆ ಕೆಎಚ್‌ಪಿ ಬಣ ಸೇರಿದ್ದರು. ನಗರಸಭೆ ಸದಸ್ಯರೊಬ್ಬರು ಮತ್ತೆ ಕಾಂಗ್ರೆಸ್ ಸೇರುವಂತೆ ಒತ್ತಾಯ ಮಾಡುತ್ತಿದ್ದು ಪ್ರಾಣ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಬೇಸತ್ತು ಕ್ರಿಮಿನಾಶಕ ಕುಡಿದಿದ್ದೇನೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT