
ಪ್ರಜಾವಾಣಿ ವಾರ್ತೆ
ಗುಡಿಬಂಡೆ: ಇಲ್ಲಿನ ದೇವರಾಜ್ ವೈನ್ಶಾಪ್ಗೆ ಭಾನುವಾರ ಕನ್ನ ಹಾಕಿರುವ ಕಳ್ಳರು, ಬಾರ್ನಲ್ಲಿದ್ದ ₹1.20 ಲಕ್ಷ ಮೌಲ್ಯದ ಮದ್ಯ ಹಾಗೂ ಡಿವಿಆರ್ ಸಹಿತವಾಗಿ ಸಿಸಿ ಕ್ಯಾಮೆರಾಗಳನ್ನು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಂದು ತಿಂಗಳ ಹಿಂದೆಯಷ್ಟೇ ಇದೇ ಬಾರ್ನಲ್ಲಿ ಕಳ್ಳತನವಾಗಿತ್ತು. ಇದೀಗ ಮತ್ತೆ ಕಳ್ಳತನವಾಗಿದೆ.
ಮಾಲೀಕನ ಮಗ ದೀಕ್ಷಿತ್ ಮಾತನಾಡಿ, ಬಾರ್ನ ಗೋಡೌನ್ ಬಾಗಿಲು ಮುರಿದ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಕೌಂಟರ್ನಲ್ಲಿದ್ದ ಸುಮಾರು ₹10 ಸಾವಿರಕ್ಕೂ ಹೆಚ್ಚು ನಗದು ಹಾಗೂ ₹1.10 ಲಕ್ಷ ಮೌಲ್ಯದ ಮದ್ಯದ ಬಾಟಲ್ಗಳನ್ನು ಕಳ್ಳತನ ಮಾಡಿ, ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.