ಚಿಕ್ಕಬಳ್ಳಾಪುರ: ಕೋವಿಡ್–19ಗೆ ತುತ್ತಾಗಿ ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗಿ ಸೋಮವಾರ ಕರ್ತವ್ಯಕ್ಕೆ ಮರಳಿದ ಎಸ್ಸ್ಪಿ ಕಚೇರಿಯ ವೈರ್ಲೆಸ್ ವಿಭಾಗದ ಹೆಡ್ ಕಾನ್ಸ್ಟೆಬಲ್ ಚಂದ್ರಶೇಖರ್ ಅವರಿಗೆ ಎಸ್ಪಿ ಕಚೇರಿಯಲ್ಲಿ ವಿಶೇಷ ಸ್ವಾಗತ ಏರ್ಪಡಿಸಲಾಗಿತ್ತು.
ಕೇಂದ್ರ ವಲಯ ಐಜಿಪಿ ಕೆ.ವಿ.ಶರತ್ಚಂದ್ರ ಮತ್ತು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಚಂದ್ರಶೇಖರ್ ಅವರನ್ನು ಸ್ವಾಗತಿಸಿ ಆರೋಗ್ಯದ ಬಗ್ಗೆ ವಿಚಾರಿಸಿ, ಆತ್ಮಸ್ಥೈರ್ಯ ತುಂಬಿದರು. ಚಂದ್ರಶೇಖರ್ ಅವರು ಎಸ್ಪಿ ಕಚೇರಿ ಪ್ರವೇಶದ ವೇಳೆ ಮಹಿಳಾ ಸಿಬ್ಬಂದಿ ಅವರ ಮೇಲೆ ಹೂವುಗಳನ್ನು ಎರಚಿ ಸ್ವಾಗತಿಸಿದ್ದು ವಿಶೇಷವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.