ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ ನಡುರಾತ್ರಿಯಿಂದ ಭಾನುವಾರ ಬೆಳಗಿನ ಜಾವದವರೆಗೆ ಭಾರಿ ಮಳೆ ಸುರಿದಿದೆ.
ಜಿಲ್ಲೆಯಲ್ಲಿ ಬಹಳಷ್ಟು ಕೆರೆಗಳು ತುಂಬಿವೆ.
ಚಿಕ್ಕಬಳ್ಳಾಪುರ ನಗರದ ಜಗಜೀವನರಾಂ ಬಡಾವಣೆ ಸೇರಿದಂತೆ ಬಹಳಷ್ಟು ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.
ಪ್ರತಿಷ್ಠಿತ ಡಿವೈನ್ ಸಿಟಿ ಕೆರೆಯಂತೆ ಆಗಿದೆ. ಈ ಬಡಾವಣೆಯ ರಸ್ತೆಗಳಲ್ಲಿ, ಮೋರಿಗಳಲ್ಲಿ ಮಳೆ ನೀರು ತುಂಬಿ ತುಳುಕುತ್ತಿದೆ.
ದೊಡ್ಡಪೈಲಗುರ್ಕಿ, ಕಣಿತಹಳ್ಳಿ, ಅಗಲಗುರ್ಕಿ ಸೇರಿದಂತೆ ಹೊಲ ತೋಟಗಳಲ್ಲಿ ಹೇರಳವಾಗಿ ನೀರು ನಿಂತಿದೆ.
ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆ, ತಲಕಾಯಲಬೆಟ್ಟದ ವೆಂಕಟೇಶ್ವರ ಸಾಗರ ತುಂಬಿ ಕೋಡಿ ಹರಿಯುತ್ತಿದೆ.
ಗೌರಿಬಿದನೂರು ತಾಲ್ಲೂಕಿನಲ್ಲಿ ಉತ್ತರ ಪಿನಾಕಿನಿ ಮತ್ತೆ ಮೈದುಂಬಿ ಹರಿಯುತ್ತಿದೆ. ಒಂದು ವಾರದಿಂದ ನದಿಯ ಹರಿವು ತಗ್ಗಿತ್ತು.
ಮಂಚೇನಹಳ್ಳಿ ಭಾಗದ ಕೆರೆಗಳು ಭರ್ತಿಯಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.